Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒತ್ತಡ ನಿರ್ವಹಣೆ ಮತ್ತು ವೃತ್ತಿ ತರಬೇತಿ ಕಾರ್ಯಾಗಾರ

ಚಿತ್ರದುರ್ಗಡಿ.10:

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಲ್ತಾನಿಪುರ ಪಿಚ್ಚಾರಹಟ್ಟಿ ಸಮುದಾಯ ಭವನದಲ್ಲಿ ಮಂಗಳವಾರ ಜನ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಒತ್ತಡ ನಿರ್ವಹಣೆ ಮತ್ತು ವೃತ್ತಿ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪಿ.ಶರೀಫ್ ಅವರು, ಒತ್ತಡ ನಿರ್ವಹಣೆಯ ಬಗ್ಗೆ ಕುಟುಂಬದಲ್ಲಿ ತಾಳ್ಮೆ ತುಂಬಾ ಮುಖ್ಯ. ಯಾವುದೇ ಒಂದು ವಿಷಯದಲ್ಲೂ ಜವಾಬ್ದಾರಿ ತೆಗೆದುಕೊಳ್ಳುವ ಮೊದಲು ಹಿಡಿ ಕುಟುಂಬದವರು ಕುಳಿತು ಚರ್ಚಿಸಿ, ನಂತರದಲ್ಲಿ ಒಳ್ಳೆಯ ವಿಷಯ ಅಥವಾ ಅಭಿಪ್ರಾಯ ತಿಳಿಸಬೇಕು ಎಂದರು.

ಕುಟುಂಬದಲ್ಲಿ ಸರ್ವರು ಸಮಾನರಾಗಿರಬೇಕು. ಸಣ್ಣ ಸಣ್ಣ ವಿಷಯಗಳಿಗೆ ಜಗಳವಾದದಂತೆ ಸಮಾಧಾನದಿಂದ ವಿಷಯ ಮನ್ನಣೆ ಮಾಡಬೇಕು ಎಂದು ಹೇಳಿದರು.

ವಕೀಲೆ ಶಕೀಲಾ ಬಾನು ಅವರು, ಸಖಿ ಒನ್ ಸ್ಟಾಪ್ ಸೆಂಟರ್ನ ಕಾರ್ಯವೈಖರಿ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಜನ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮ ಸಂಯೋಜಕಿ ಶೃತಿ ಮಾತನಾಡಿ, ಕೌಶಲ್ಯ ತರಬೇತಿ ಮತ್ತು ವೃತ್ತಿ ತರಬೇತಿ ಪಡೆಯುವುದು ತುಂಬಾ ಮುಖ್ಯವಾಗಿದೆ. ಸರ್ಕಾರದಿಂದ ತರಬೇತಿ ಪಡೆದ ನಂತರ ಸರ್ಟಿಫಿಕೇಟ್ ಅನ್ನು ವಿತರಿಸಲಾಗುವುದು. ಇದರಿಂದ ಮುಂದಿನ ದಿನಗಳಲ್ಲಿ ಇಲಾಖೆಗಳಿಂದ ಸಬ್ಸಿಡಿ ಅಥವಾ ಸಹಾಯಧನ ಪಡೆದು ವೃತ್ತಿಯನ್ನು ನಿರ್ವಹಿಸಿಕೊಂಡು ಹೋಗಬಹುದು ಎಂದು ತಿಳಿಸಿದರು.

ಮಹಿಳಾ ಸಬಲೀಕರಣ ಘಟಕದ ಜಂಡರ್ ಸ್ಪೆಷಲಿಸ್ಟ್ ಟಿ.ಗೀತಾ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ,ಪೋಕ್ಸೋ ಕಾಯ್ದೆ ಮತ್ತು ಜಿಲ್ಲೆಯಲ್ಲಿ ಶಕ್ತಿ ಸದನ ಸಖಿನಿವಾಸ್ ಇವುಗಳ ಕಾರ್ಯವೈಖರಿಗಳ ಬಗ್ಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಇರುವ ಮಹಿಳಾಧಾರಿತ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ನಂತರದಲ್ಲಿ ವೃತ್ತಿ ತರಬೇತಿಯನ್ನು ಪಡೆದ ಅಭ್ಯರ್ಥಿಗಳಿಗೆ ಸರ್ಟಿಫಿಕೇಟ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ರುದ್ರಮ್ಮ, ಗ್ರಾಮಸ್ಥರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ