Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಪ್ರದಾಯಿಕ ಬೆಳೆಗಳ ಬದಲಾಗಿ ಪರ್ಯಾಯ ಬೆಳೆ ಬೆಳೆಯಲು ಸಲಹೆ

ಕೊಪ್ಪಳ ಜುಲೈ 25 2026-27 ನೇ ಸಾಲಿನ ಮುಂಗಾರು ಹಾಗೂ ತಡ ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ಹವಾಮಾನ ವೈಪರೀತ್ಯ ಹಾಗೂ ಮಳೆಯ ಕೊರತೆಯಿಂದಾಗಿ ರೈತರು ಸಾಂಪ್ರದಾಯಿಕ ಬೆಳೆಗಳಿಗೆ ಪರ್ಯಾಯವಾಗಿ ಕಡಿಮೆ ನೀರು ಅಗತ್ಯವಿರುವ ಬೆಳೆಗಳನ್ನು ಬೆಳೆಯಲು ಮುಂದಾಗುವುದು ಅತ್ಯಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ಜಮೀನುಗಳಲ್ಲಿ ಬಿತ್ತನೆ ಮಾಡಿರುವ ಕೆಲವು ಬೆಳೆಗಳು ತೇವಾಂಶದ ಕೊರತೆಯಿಂದ ಬಾಡಲಾರಂಭಿಸಿವೆ. ಆದ್ದರಿಂದ ರೈತರು ಕಡಿಮೆ ಮಳೆಯಲ್ಲಿಯೂ ಬೆಳೆಯಬಹುದಾದ ಹಾಗೂ ಬರ ಪರಿಸ್ಥಿತಿಯನ್ನು ತಡೆದುಕೊಳ್ಳುವ ತೊಗರಿ, ಸಜ್ಜೆ, ಸೂರ್ಯಕಾಂತಿ ಮತ್ತು ಸಿರಿಧಾನ್ಯಗಳಂತಹ ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು.
ಈ ಬೆಳೆಗಳು ಕಡಿಮೆ ಅವಧಿಯಲ್ಲಿ ಉತ್ತಮ ಆದಾಯ ನೀಡುವ ಸಾಮರ್ಥ್ಯ ಹೊಂದಿದ್ದು, ಬೆಳೆ ನಷ್ಟವನ್ನು ಕಡಿಮೆ ಮಾಡಲು ಹಾಗೂ ಮಣ್ಣಿನ ಫಲವತ್ತತೆಯನ್ನು ಕಾಪಾಡಲು ಸಹಕಾರಿಯಾಗುತ್ತವೆ. ರೈತರು ತಮ್ಮ ಜಮೀನಿನ ಮಣ್ಣಿನ ಗುಣಲಕ್ಷಣ, ಲಭ್ಯವಿರುವ ತೇವಾಂಶ ಮತ್ತು ಸ್ಥಳೀಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ಬೆಳೆಗಳನ್ನು ಆಯ್ಕೆ ಮಾಡಬೇಕು. ಇದರಿಂದ ಮಣ್ಣಿನ ಪೋಷಕಾಂಶಗಳ ಸಮತೋಲನ ಕಾಪಾಡಿಕೊಂಡು ಮುಂದಿನ ಬೆಳೆಗಳಿಗೂ ಅನುಕೂಲವಾಗುತ್ತದೆ. ಅಲ್ಲದೆ, ಸ್ಥಳೀಯ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಉತ್ತಮ ಬೇಡಿಕೆ ಮತ್ತು ಬೆಲೆ ದೊರೆಯುವ ಸಾಧ್ಯತೆಯಿದೆ.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಸಜ್ಜೆ, ಮೆಕ್ಕೆಜೋಳ, ತೊಗರಿ, ಅಲಸಂದಿ, ಹತ್ತಿ ಸೇರಿದಂತೆ ಅಧಿಸೂಚಿತ ಬೆಳೆಗಳಿಗೆ ರೈತರು ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಮುಂದಾಗಬೇಕು.
ಹೆಚ್ಚಿನ ಮಾಹಿತಿ, ಪರ್ಯಾಯ ಬೆಳೆಗಳ ಆಯ್ಕೆ ಹಾಗೂ ಅಧಿಸೂಚಿತ ಬೆಳೆಗಳ ವಿವರಗಳಿಗಾಗಿ ರೈತರು ಸಮೀಪದ ಬ್ಯಾಂಕ್ ಶಾಖೆ, ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಥಮ ವರ್ಷದ ಎಂ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನಮುಂಗಾರು ಮಳೆ ಕೊರತೆ: ಬಳ್ಳಾರಿ ತಾಲ್ಲೂಕಿನ ವಿವಿಧ ಗ್ರಾಮದ ಬೆಳೆ ವೀಕ್ಷಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಡ್ರಾಟ್‌ ಟ್ರಿಗರ್‌ ನಿಯಮದಡಿ ಬರ ಘೋಷಣೆಗೆ ಪ್ರಸ್ತಾವನೆ ಸಲ್ಲಿಕೆಜುಲೈ 27ರಂದು ಕಮಲಾಪುರದಲ್ಲಿ "ಎರಬೂತ (ಗ್ರೇಟ್ ಇಂಡಿಯನ್ ಬಸ್ಟರ್ಡ್)" ಸಂರಕ್ಷಣೆ ಕುರಿತು ಪ್ರಾದೇಶಿಕ ಕಾರ್ಯಾಗಾರಮಹಿಳೆಯರು ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ: ತಾ.ಪಂ ಸಹಾಯಕ ನಿರ್ದೇಶಕ ಮಹೇಶ್ -ರೈತರು ‘ಕುಸುಮ್-ಬಿ’ ಯೋಜನೆಯಡಿ ಸೋಲಾರ್ ವಿದ್ಯುತ್ ಪಂಪ್‌ಸೆಟ್‌ ಅಳವಡಿಕೆಗೆ ಮುಂದಾಗಿ: ಕೊಪ್ಪಳ ಸಂಸದ ಕೆ.ರಾಜಶೇಖರ ಹಿಟ್ನಾಳ ----ಶಿವಮೊಗ್ಗ ವಿಧಾನಸಭಾ ಕ್ಷೇತ್ರ: ಜುಲೈ 25 ಮತ್ತು 26 ರಂದು ಮತದಾರರ ಪಟ್ಟಿಯ 'ವಿಶೇಷ ಪ್ರಚಾರ ದಿನ'ಸಾಂಪ್ರದಾಯಿಕ ಬೆಳೆಗಳ ಬದಲಾಗಿ ಪರ್ಯಾಯ ಬೆಳೆ ಬೆಳೆಯಲು ಸಲಹೆಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 24 ರವರೆಗೆ 10,11,946 ಗಣತಿ ನಮೂನೆಗಳ ಡಿಜಿಟಲೀಕರಣ ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 24 ರವರೆಗೆ 10,11,946 ಗಣತಿ ನಮೂನೆಗಳ ಡಿಜಿಟಲೀಕರಣ ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 24 ರವರೆಗೆ 10,11,946 ಗಣತಿ ನಮೂನೆಗಳ ಡಿಜಿಟಲೀಕರಣ