Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕವಿತಾಳ: ಕೆರೆ ಭರ್ತಿಗೇ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ

ಕವಿತಾಳ: ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಸಮೀಪದ ಲಕ್ಷೀ ನಾರಾಯಣ ಕ್ಯಾಂಪ್ ನಲ್ಲಿರುವ ಕುಡಿಯುವ ನೀರಿನ ಕೆರೆಗೆ ಸಿರವಾರ ತಹಶೀಲ್ದಾರ್ ರವಿ ಎಸ್. ಅಂಗಡಿ ಭೇಟಿ ನೀಡಿ ಪರಿಶೀಲಿಸಿದರು.


ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಹಾಗೂ ಮಾನ್ವಿ ಶಾಸಕರ ಸೂಚನೆ ಮೇರೆಗೆ ಭೇಟಿ ನೀಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಕಾರಣದಿಂದಾಗಿ ಜೂನ್ 15ರಿಂದ 25ರವರೆಗೆ ಡ್ಯಾಮ್ ನಿಂದ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಪಟ್ಟಣ ಪಂಚಾಯತಿ ಹಾಗೂ ಕಂದಾಯ ಅಧಿಕಾರಿಗಳು ಕೆರೆಗೆ ನೀರು ತುಂಬಿಸಿ, ನೀರು ಪೂರೈಕೆಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಕಟ್ಟುನಿಟ್ಟಾಗಿ ಅಧಿಕಾರಿಗಳಿಗೆ ಸೂಚಿಸಿದರು.


ಕಳೆದ 15 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಡ್ಯಾಮ್ ಗಳಲ್ಲಿ ನೀರು ಶೇಖರಣೆಯಾಗುತ್ತಿದೆ. ಸಾರ್ವಜನಿಕರಿಗೆ ನೀರಿನ ತೊಂದರೆ ಇರುವುದರಿಂದ ಸರ್ಕಾರದ ಗಮನಕ್ಕೆ ತರಲಾಗಿದ್ದು, ಡ್ಯಾಮ್ ನಿಂದ ನೀರು ಹರಿಸಿ ಕೆರೆಗಳ ಬರ್ತಿಗೆ ಸೂಚಿಸಿದ್ದಾರೆ. ಕೂಡಲೇ ಪಂಚಾಯತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳನ್ನು ತುಂಬಿಸಿಕೊಂಡು ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೇಳಿದರು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ನೀರಾವರಿ ಇಲಾಖೆ ಅಧಿಕಾರಿ ವಿಜಯಲಕ್ಷ್ಮಿ ಪಾಟೀಲ್, ಉಪ ತಹಶೀಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ್,

ಪ.ಪಂ.ಸಿಬ್ಬಂದಿ ರಾಘವೇಂದ್ರ ಸೇರಿದಂತೆ ಪ.ಪಂ.ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ