Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡನಾಡು ಮತ್ತು ಭಾಷೆಯ ಸೊಗಡು ಅನನ್ಯವಾದುದು” ಜೆ.ನರಸಿಂಹಮೂರ್ತಿ ಅಭಿಮತ.

 

ಸಿರುಗುಪ್ಪ: ನಗರದ ವಿಶ್ವಜ್ಯೋತಿ ಮಾಂಟೇಸರಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ‘ಸಿರುಗುಪ್ಪ ಬೀಚಿ’ ಎಂದು ಹೆಸರಾದ ನಿರೂಪಕರು ಹಾಸ್ಯ ಕಲಾವಿದರಾದ ಶ್ರೀ ಜೆ.ನರಸಿಂಹಮೂರ್ತಿಯವರು ಮಾತನಾಡಿ “ನಮ್ಮ ತಾಯಿ ಗರ್ಭದಿಂದ ಬಂದ ತೊದಲ್ ನುಡಿ ಮಾತೃಭಾಷೆ ಕನ್ನಡವಾಗಿದ್ದು, ಸಾವಿರಾರು ವರ್ಷಗಳ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವುದು ಹೆಮ್ಮೆಯ ವಿಷಯವಾಗಿದೆ. ಕನ್ನಡ ನಾಡು ಸರ್ವ ಜನಾಂಗದ ಶಾಂತಿಯ ನೆಲೆಯಾಗಿದ್ದು, ನಮ್ಮ ಭಾಷೆಯ ಸಾಹಿತ್ತಿಕ ಸೊಗಡು ಓದುಗರನ್ನು ಆಕರ್ಷಿಸುತ್ತದೆ. ಇಂತಹ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ಪ್ರೀತಿಸೋಣ, ಗೌರವಿಸೋಣ. ಕನ್ನಡ ನಾಡು ನುಡಿಗಾಗಿ ನಮ್ಮ ಕೈಲಾದಷ್ಟು ಸೇವೆಯನ್ನು ಸಲ್ಲಿಸೋಣ. ಪ್ರತಿಯೊಬ್ಬ ಅನ್ನಭಾಷಿಕರನ್ನು ಕನ್ನಡ ಭಾಷೆಯಲ್ಲಿ ಮಾತಾಡಲು ಪ್ರೇರೇಪಿಸುವ ಮೂಲಕ ಅನ್ಯ ಭಾಷೆಗಳ ಪ್ರಭಾವದ ನಡುವೆ ನಮ್ಮ ಕನ್ನಡ ಭಾಷೆಯ ಅನನ್ಯತೆಯನ್ನು ಉಳಿಸಿ ಬೆಳೆಸಲು ಶ್ರಮಿಸೋಣ” ಎಂದರು.
ಈ ಕಾರ್ಯಕ್ರಮದಲ್ಲಿ ಕನ್ನಡದ ಕವಿ ದ.ರಾ. ಬೇಂದ್ರೆಯವರ ನಾಕು ತಂತಿಯ ಒಂದು ಹಾಡನ್ನು ತೆಗೆದುಕೊಂಡು ಅದಕ್ಕೆ ಬೇಂದ್ರೆಯವರ ಬೇರೆ ಬೇರೆ ಹಾಡುಗಳನ್ನು ಸಂಯೋಜಿಸಿ ಇಡೀ ಬೇಂದ್ರೆಯವರ ಜೀವನ ಚರಿತ್ರೆಯನ್ನು ಹಾಡಿನ ರೂಪಕದ ಮೂಲಕ ಮಕ್ಕಳು ಪ್ರಸ್ತುತಪಡಿಸಿದ್ದು ಮೆಚ್ಚುಗೆಗೆ ಪಾತ್ರವಾಯಿತು. ಬೇಂದ್ರೆಯವರ ನಾನು ಬಡವ ನೀನು ಬಡವಿ, ನೀ ಹಿಂಗ ನೋಡಬೇಡ ನನ್ನ ಇಂತಹ ಸಾಹಿತ್ಯದ ಮಜಲುಗಳನ್ನು ರೂಪಕದಲ್ಲಿ ಬಳಸಲಾಗಿತ್ತು. ಮಕ್ಕಳಿಂದ ನಡೆದ ಡೊಳ್ಳು ನೃತ್ಯ, ಜಾನಪದ ನೃತ್ಯಗಳು,ಕಾಂತಾರದ ದೃಶ್ಯ ಜನಮನ ಸೆಳೆದವು. ಇದೇ ಸಂದರ್ಭದಲ್ಲಿ ಹಾಸ್ಯ ಕಲಾವಿದರಾದ ಜೆ.ನರಸಿಂಹಮೂರ್ತಿಯವರು ತಮ್ಮ ಹಾಸ್ಯ ಪ್ರಸಂಗಗಳ ಮೂಲಕ ನೆರೆದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದರು.
ಸದರಿ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ವಿವೇಕಾನಂದ, ಶ್ರೀಮತಿ ಗೌರಿ, ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಶ್ರೀಮತಿ ರಾಜೇಶ್ವರಿ ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಮಕ್ಕಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ