Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಕಲ ಗೌರವಗಳಿಂದ ನಡೆದ ಹುತಾತ್ಮ ಯೋಧನ ಅಂತ್ಯ ಸಂಸ್ಕಾರ

ಮಾನ್ವಿ:ಪಟ್ಟಣದ ಆರ್.ಜಿ.ಕ್ಯಾಂಪ್‌ನ ನಿವಾಸಿ ಹಾಗೂ ತಮಿಳುನಾಡಿನ ಕಲ್ಪಕಂ ಪರಮಾಣು ವಿದ್ಯುತ್ ತಯಾರಿಕ ಕೇಂದ್ರದಲ್ಲಿ ರಕ್ಷಣೆಯ ಸೇವೆ ಸಲ್ಲಿಸುತ್ತಿದ್ದ ಸಮಯದಲ್ಲಿ ತಮ್ಮ ರಾತ್ರಿಪಾಳಿ ಕೇಲಸವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ಆಕಸ್ಮಿಕವಾಗಿ ಕೈಯಲಿರುವ ಬಂದೂಕಿನಿAದ ಗುಂಡು ಹಾರಿ  ಮೃತಪಟ್ಟಿರುವ ಕೈಗಾರಿಕಾ ಭದ್ರತಾ ಪಡೆಯ ಹುತಾತ್ಮ ಯೋಧ ಹಾಗೂ ಹೆಡ್ ಕಾನ್ಸ್ಟೆಬಲ್ ವೈ.ರವಿಕಿರಣ್ . ವ.37 ರವರ ಮೃತ ದೇಹವನ್ನು ಕೈಗಾರಿಕಾ ಭದ್ರತಾ ಪಡೆಯ ಸಬ್ ಇನ್ಸೆಪೆಕ್ಟರ್ ಅಂಕಿತ ಭಟಸಾಲ ನೇತೃತ್ವದ ಯೋಧರ ತಂಡ ಕುಟುಂಬಸ್ಥರಿಗೆ ಒಪ್ಪಿಸಿ ಗೌರವ ವಂದನೆ ಸಲ್ಲಿಸಿದರು.

ತಾಲೂಕು ಆಡಳಿತ ಹಾಗೂ ಕುಟುಂಬಸ್ಥರು  ಹುತಾತ್ಮ ಯೋಧ ವೈ.ರವಿಕಿರಣ್ ಮೃತ ದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದರು ನೂರಾರು ಯುವಕರು ಬೈಕ್ ರ‍್ಯಾಲಿ ಮೂಲಕ ಮೃತದೇಹವನ್ನು ಕರೆತರಲಾಯಿತು. ತಾಲೂಕು ಆಡಳಿತದ ಪರವಾಗಿ ಶಾಸಕ ಹಂಪಯ್ಯನಾಯಕ ಹಾಗೂ ಗ್ರೇಡ್-2 ತಹಸೀಲ್ದರ್ ಅಬ್ದುಲ್ ವಾಹಿದ್, ಪಿ.ಐ.ವೀರಭದ್ರಯ್ಯ ಹಿರೇಮಠ ಹೂವಿನ ಹಾರವನ್ನು ಹಾಕಿ ಗೌರವ ಸಲ್ಲಿಸಿದರು. 

ನಂತರ ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ್,ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ವಿ.ಚನ್ನರೆಡ್ಡಿ, ಮಾಜಿ ಯೋಧರಾದ ಜಲ್ಲಿ ಆಂಜನೇಯ್ಯ, ಹಾಲಿ ಯೋಧರಾದ ದುರ್ಗಪ್ರಸಾದ್, ಶರಣಬಸವ, ವಂದೆ ಮಾತರಂ ಸಂಘದ ಅಧ್ಯಕ್ಷರಾದ ಮೆಹಬೂಬ್ ಮದ್ಲಾಪೂರ್  ಸೇರಿದಂತೆ ಕುಟುಂಬದವರು ಹಾಗೂ ನೂರಾರು ಅಭಿಮಾನಿಗಳು ಗೌರವ ಸಲ್ಲಿಸಿದರು .



ಕುಟುಂಬದವರ ಸ್ವಂತ ಜಮೀನಿನಲ್ಲಿ ಅಂತ್ಯ ಕ್ರೀಯೆ ನಡೆಯಿತು. ಸಿ.ಐ.ಎಸ್.ಎಫ್. ಸಬ್ ಇನ್ಸೆಪೆಕ್ಟರ್ ಅಂಕಿತ ಭಟಸಾಲ ನೇತೃತ್ವದಲ್ಲಿ ಯೋಧರಾದ ಸಂತೋಷಕುಮಾರ್, ಭರತಕುಮಾರ್,ಭೂಜರಾಜ ಶರ್ಮ,ಕೆ.ಕೆ.ನಗರವಾಲ್ ಹಾಗೂ ರಾಯಚೂರಿನ ಆರ್.ಟಿ.ಪಿ.ಎಸ್. ಸಿ.ಐ.ಎಸ್.ಎಫ್. ಸಬ್ ಇನ್ಸೆಪೆಕ್ಟರ್‌ಎಸ್.ಖಾಜವಾಲಿ ಹೆಡ್ ಕಾನ್ಸಟೆಬಲ್ ರವಿ.ಕುಪಲಿ ಈಶ್ವರರಾವ್, ಕೆ.ಡಿ.ವಾಗಮಾರೆ,ಮೌನೇಶ ಕುಮಾರ್,ದೀಪಾಕ್ ಮಹಮ್ಮದ್, ಸಿ.ಐ.ಎಸ್.ಎಫ್. ಸಂಪ್ರದಾಯದAತೆ ಯೋಧರು ಗೌರವ ವಂದನೆ ಸಲ್ಲಿಸಿದರು.

ಮನೆಯ ಅವರಣದಲ್ಲಿ ಅಂತಿಮ ದರ್ಶನ ಸಮಯದಲ್ಲಿ ಹುತಾತ್ಮ ಯೋಧನ ಪತ್ನಿ ಅನುಷ, ಇಬ್ಬರು ಪುತ್ರಿಯರಾದ ಯಶಸ್ವಿನಿ,ರಿತಿಕಾ , ತಂದೆ ವೈ .ಅಬ್ಬುಲು.ತಾಯಿ ವೈ.ವರಲಕ್ಷಿö್ಮ, ಸಹೋದರ ಮುರಳಿ ರವರು ರೋಧಿಸುತ್ತಿರುವ ದೃಶ್ಯ ಮನಕಲಕುವಂತೆ ಇತ್ತು.

ಹುತಾತ್ಮ ಯೋಧನ ಮಾವ ಕಾಮೇಶ್ವರರಾವ್ ಮಾತನಾಡಿ ಮದುವೆಯಾಗಿ ಹತ್ತು ವರ್ಷವಾಗಿದರಿಂದ ಮದುವೆಯ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು ಎನ್ನುವ ಉದ್ದೇಶದಿಂದ ಮಗಳು ಹಾಗೂ ಮೋಮ್ಮಕಳು ಪಟ್ಟಣಕ್ಕೆ ಬಂದಿದ್ದರು ರಜೆಗಾಗಿ ಅಳಿಯ ಪ್ರಯತ್ನಿಸುತ್ತಿದ್ದ ಬಟ್ಟೆ,ಒಡವೆ ಸೇರಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಅಳಿಯನಿಗಾಗಿ ಕಾಯುತ್ತಿದ್ದೆವು ಅದ್ದರೆ ಅಳಿಯ ಇಂದು ಮನೆಗೆ ಶವವಾಗಿ ಬಂದಿರುವುದು ಕುಟುಂಬದವರಿಗೆ ಅತ್ಯಂತ ದುಃಖವನ್ನುಂಟು ಮಾಡಿದೆ ಎಂದು ಸಂಬAದಿಕರಲ್ಲಿ ಹೇಳಿಕೊಂಡು ರೋಧಿಸುತ್ತಿರುವುದು ಎಂತಹವರನ್ನಾದರು ಕರಗುವಂತೆ ಮಾಡುತ್ತಿತ್ತು. 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ