Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಮನರಂಜನೆ ಸುದ್ದಿ

"ಈ ಪಾದ ಪುಣ್ಯ ಪಾದ" ಚಲನಚಿತ್ರ ಟೈಟಲ್ ಬಿಡುಗಡೆ

ಬೆಂಗಳೂರ :ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಕನ್ನಡ ಚಲನಚಿತ್ರ “ಈ ಪಾದ ಪುಣ್ಯ ಪಾದ" ಎಂಬ ಚಲನಚಿತ್ರದ ಟೈಟಲನ್ನು ಖ್ಯಾತ ಚಲನಚಿತ್ರ ನಿರ್ದೇಶಕರಾದ "ಶಶಾಂಕ್" ರವರು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಚಿತ್ರ ತಂಡಕ್ಕೆ ಶುಭ ಕೋರಿದರು.
ದಾರಿ ಯಾವುದಯ್ಯಾ ವೈಕುಂಠಕೆ, ಬ್ರಹ್ಮ ಕಮಲ, ತಾರಿಣಿ ಮುಂತಾದ ಸದಭಿರುಚಿ ಚಿತ್ರಗಳನ್ನು ನಿರ್ದೇಶನ ಮಾಡಿ ಹಲವಾರು ಚಲನಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡು ಸೈ ಎನಿಸಿಕೊಂಡಿರುವ "ಸಿದ್ದು ಪೂರ್ಣಚಂದ್ರ" ರವರು ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಈ ಕಥೆಯ ವಿಶೇಷವೇನೆಂದರೆ ಕಾಲುಗಳ ಮೇಲೆ ಕಥೆ ಬರೆಯಲಾಗಿದೆ.ಎಲ್ಲಾ ಪಾತ್ರಗಳ ಕಾಲುಗಳು ಕಥೆ ಹೇಳುತ್ತವೆ. ಮಗುವಿನ ಪಾದ, ದೊಡ್ಡವರ ಪಾದ, ವಯಸ್ಸಾದ ಪಾದ, ಧಣಿದ ಪಾದ, ಖುಷಿಯ ಪಾದ, ಪಾಪದ ಪಾದ, ಆನೆಕಾಲು ರೋಗಿಯ ಪಾದ ಹೀಗೆ ನಾನಾ ಪಾದಗಳಿಂದ ಕೂಡಿದ ವಿನೂತನ ಕಥಾ ಹಂದರ ಹೊಂದಿರುವ ಚಿತ್ರವಾಗಿದೆ.
ಮುಖ್ಯಪಾತ್ರದಲ್ಲಿ ಆಟೋ ನಾಗರಾಜ್, ಮಮತಾ ರಾಹುತ್, ಪ್ರಭಾಕರ್ ಬೋರೇಗೌಡ, ಪ್ರಮಿಳಾ ಸುಬ್ರಹ್ಮಣ್ಯಂ, ಹರೀಶ್ ಕುಂದೂರ್, ಸನ್ನಿ, ಇನ್ನೂ ಮುಂತಾದವರ ತಾರಾಗಣವಿದೆ. ಛಾಯಾಗ್ರಹಣ ರಾಜು ಹೆಮ್ಮಿಗೆಪುರ, ಸಂಗೀತ ಅನಂತ್ ಆರ್ಯನ್, ಸಂಕಲನ ದೀಪಕ್, ವಸ್ತ್ರ ವಿನ್ಯಾಸ ನಾಗರತ್ನ ಕೆ ಹೆಚ್, ಪ್ರೊಡಕ್ಷನ್ ಡಿಸೈನ್ ದಿಲೀಪ್ ಹೆಚ್ ಆರ್, ಕಾರ್ಯಕಾರಿ ನಿರ್ಮಾಪಕರು ಪುಟ್ಟರಾಜು ಎ ಕೆ ಆಲಗೌಡನ ಹಳ್ಳಿ ಮತ್ತು ಕಲಾ ನಿರ್ದೇಶನ ಬಸವರಾಜ್ ಆಚಾರ್ ,ಪಿಆರ್‌ಓ ಸುಧೀಂದ್ರ ವೆಂಕಟೇಶ,ಡಾ.ಪ್ರಭು ಗಂಜಿಹಾಳ,ಡಾ.ವೀರೇಶ ಹಂಡಿಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ. ಬೆಂಗಳೂರು ರಾಮನಗರ, ಚನ್ನಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಚಿತ್ರೀಕರಣವಾಗುತ್ತದೆ ಎಂದು ನಿರ್ದೇಶಕ ಸಿದ್ದು ಪೂರ್ಣಚಂದ್ರ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಡಿತರ ಪಡೆಯುವ ಪ್ರತಿಯೋಬ್ಬರು ಇ-ಕೆವೈಸಿ ಮಾಡಿಸಲು ಸೆ.30 ರಂದು ಕೊನೆಯ ದಿನಖಾಸಗೀಕರಣದಿಂದ ಶಿಕ್ಷಣ ವ್ಯವಸ್ಥೆಗೆ ತೊಂದರೆ; ಡಾ ನುಗಡೋಣಿಬಲಕುಂದಿಯಲ್ಲಿ ‘ಎಂತ ಮಹಿಮಾನಿತ ಗೊಳ್ಯದ ಗಾದಿಲಿಂಗಪ್ಪ ತಾತನವರ’ ನಾಟಕ ಪ್ರದರ್ಶನ. ಐದು ಗುಡಿ ಲಿಂಗೇಶ್ವರ ಹಬ್ಬದ ಅಂಗವಾಗಿ ಭಕ್ತಿ ಸಂಭ್ರಮ; ಕಲಾವಿದರಿಗೆ ಸನ್ಮಾನಬಳ್ಳಾರಿ ಶಾಸಕದ್ವಯರಿಂದ ಪ್ರಜಾಸೇವಾ ಇಲಾಖೆ ಕುರಿತು ಶ್ಲಾಘನೆ ಪ್ರಜಾಸೇವಾ ಆಂದೋಲನ ಸಭೆ ಇಡೀ ದೇಶಕ್ಕೆ ಮಾದರಿಯಾಗಲಿದೆನೇಪಾಳದಲ್ಲಿ ಕಾಣೆಯಾದ ಕನ್ನಡಿಗರ ಡಿಎನ್‌ಎ ಮಾದರಿ ಸಂಗ್ರಹಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆಸಂಶೋಧನೆಯಲ್ಲಿ ವಿಭಿನ್ನತೆ ಕುಂಠಿತ: ಪ್ರೊ.ಪಿ.ಎಲ್ ಧರ್ಮ ಅಭಿಪ್ರಾಯಭದ್ರಾ ಮೇಲ್ದಂಡೆ ಯೋಜನೆ - ನದಿ ಪಾತ್ರದ ಜನರಿಗೆ ಎಚ್ಚರಿಕೆಕಲ್ಯಾಣ ಕರ್ನಾಟಕ ಉತ್ಸವ: ಸೆಪ್ಟೆಂಬರ್ 8 ರಂದು ಪೂರ್ವಭಾವಿ ಸಿದ್ಧತಾ ಸಭೆದೃಷ್ಟಿಹೀನತೆಯ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿ: ಜಿಲ್ಲಾ ಆರೋಗ್ಯಾಧಿಕಾರಿ ಶಿವಾನಂದ ವಿ.ಪಿ ಕರೆಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ ಘೋಷಣೆ