Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.20ರಂದು ಎರೆಹುಳು ಗೊಬ್ಬರ ಮತ್ತು ವಿವಿಧ ಕಾಂಪೋಷ್ಟ್ ತಯಾರಿಕಾ ತಾಂತ್ರಿಕತೆ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿಕೆ



ಚಿತ್ರದುರ್ಗಜೂ.18:

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 20ರಂದು ಬೆಳಿಗ್ಗೆ 10ಕ್ಕೆ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಗೆ ವೈಜ್ಞಾನಿಕ ಪದ್ದತಿಯಲ್ಲಿ ಎರೆಹುಳು ಗೊಬ್ಬರ ಮತ್ತು ವಿವಿಧ ಕಾಂಪೋಷ್ಟ್ ತಯಾರಿಕಾ ವಿಧಾನಗಳ ಕುರಿತು ಒಂದು ದಿನದ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಳಾಗಿದೆ.

ಬೆಳಿಗ್ಗೆ ಹಿರಿಯೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಮತ್ತು ಕೀಟಶಾಸ್ತ್ರಜ್ಞ ಡಾ.ಟಿ.ರುದ್ರಮುನಿ ಅವರು ಲಭ್ಯವಿರುವ ಕೃಷಿ ಮತ್ತು ಪಶುಸಂಗೋಪನೆ ತ್ಯಾಜ್ಯಗಳನ್ನು ಬಳಸಿ ವಿವಿಧ ಕಾಂಪೋಷ್ಟ್ ತಯಾರಿಕೆಯ ತಾಂತ್ರಿಕತೆಗಳ ಕುರಿತು ಮತ್ತು ವೈಜ್ಞಾನಿಕ ಪದ್ದತಿಯಲ್ಲಿ ಎರೆಹುಳು ಗೊಬ್ಬರ ತಯಾರಿಕಾ ಬಗ್ಗೆ ವಿಷಯ ಮಂಡನೆ ಮಾಡುವರು. ಹಾಗೂ ಹಿರಿಯೂರು ತಾಲ್ಲೂಕಿನ ಐಮಂಗಳ ಹೋಬಳಿಯ ಗುಳಗೊಂಡನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ನಾಗರಜಪ್ಪನವರು ಎರೆಹುಳು ಗೊಬ್ಬರ ತಯಾರಿಕೆ ವಿಧಾನದ ಬಗ್ಗೆ ತಮ್ಮ ಅನುಭವವನ್ನು ರೈತರೊಂದಿಗೆ ಹಂಚಿಕೊಳ್ಳುವರು.

ಮಧ್ಯಾಹ್ನ ಹಿರಿಯೂರಿನ ಕೆವಿಕೆ ಎರೆಹುಳು ಗೊಬ್ಬರ ಮತ್ತು ವಿವಿಧ ಕಾಂಪೋಷ್ಟ್ ತಯಾರಿಕಾ ಘಟಕಗಳನ್ನು ವಿಕ್ಷಣೆ ಮತ್ತು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಲಾಗುವುದು. ಆದ ಪ್ರಯುಕ್ತ ಆಸಕ್ತ 70 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.

ಮೊದಲು ನೋಂದಾವಣಿ ಮಾಡಿಕೊಂಡ 70 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ಕೋರಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ