Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.20ರಂದು ಎರೆಹುಳು ಗೊಬ್ಬರ ಮತ್ತು ವಿವಿಧ ಕಾಂಪೋಷ್ಟ್ ತಯಾರಿಕಾ ತಾಂತ್ರಿಕತೆ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿಕೆ



ಚಿತ್ರದುರ್ಗಜೂ.18:

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 20ರಂದು ಬೆಳಿಗ್ಗೆ 10ಕ್ಕೆ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಗೆ ವೈಜ್ಞಾನಿಕ ಪದ್ದತಿಯಲ್ಲಿ ಎರೆಹುಳು ಗೊಬ್ಬರ ಮತ್ತು ವಿವಿಧ ಕಾಂಪೋಷ್ಟ್ ತಯಾರಿಕಾ ವಿಧಾನಗಳ ಕುರಿತು ಒಂದು ದಿನದ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಳಾಗಿದೆ.

ಬೆಳಿಗ್ಗೆ ಹಿರಿಯೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಮತ್ತು ಕೀಟಶಾಸ್ತ್ರಜ್ಞ ಡಾ.ಟಿ.ರುದ್ರಮುನಿ ಅವರು ಲಭ್ಯವಿರುವ ಕೃಷಿ ಮತ್ತು ಪಶುಸಂಗೋಪನೆ ತ್ಯಾಜ್ಯಗಳನ್ನು ಬಳಸಿ ವಿವಿಧ ಕಾಂಪೋಷ್ಟ್ ತಯಾರಿಕೆಯ ತಾಂತ್ರಿಕತೆಗಳ ಕುರಿತು ಮತ್ತು ವೈಜ್ಞಾನಿಕ ಪದ್ದತಿಯಲ್ಲಿ ಎರೆಹುಳು ಗೊಬ್ಬರ ತಯಾರಿಕಾ ಬಗ್ಗೆ ವಿಷಯ ಮಂಡನೆ ಮಾಡುವರು. ಹಾಗೂ ಹಿರಿಯೂರು ತಾಲ್ಲೂಕಿನ ಐಮಂಗಳ ಹೋಬಳಿಯ ಗುಳಗೊಂಡನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ನಾಗರಜಪ್ಪನವರು ಎರೆಹುಳು ಗೊಬ್ಬರ ತಯಾರಿಕೆ ವಿಧಾನದ ಬಗ್ಗೆ ತಮ್ಮ ಅನುಭವವನ್ನು ರೈತರೊಂದಿಗೆ ಹಂಚಿಕೊಳ್ಳುವರು.

ಮಧ್ಯಾಹ್ನ ಹಿರಿಯೂರಿನ ಕೆವಿಕೆ ಎರೆಹುಳು ಗೊಬ್ಬರ ಮತ್ತು ವಿವಿಧ ಕಾಂಪೋಷ್ಟ್ ತಯಾರಿಕಾ ಘಟಕಗಳನ್ನು ವಿಕ್ಷಣೆ ಮತ್ತು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಲಾಗುವುದು. ಆದ ಪ್ರಯುಕ್ತ ಆಸಕ್ತ 70 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.

ಮೊದಲು ನೋಂದಾವಣಿ ಮಾಡಿಕೊಂಡ 70 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ಕೋರಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ