Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತರಬೇತಿ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ



ಕೊಪ್ಪಳ ಆಗಸ್ಟ್ 05  ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆ ವತಿಯಿಂದ 42 ದಿನಗಳ ಕಾಲ ಹಮ್ಮಿಕೊಂಡಿರು ಸಾಮಾನ್ಯ ಬುನಾದಿ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಗ್ರುಫ್ ಸಿ ವೃಂದದ ಲಿಪಿಕ ಪ್ರಶಿಕ್ಷಾರ್ಥಿಗಳು ಪಡೆದುಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಅವರು ಮಂಗಳವಾರ ಕೊಪ್ಪಳ ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಇತ್ತಿಚೆಗೆ ಆಯ್ಕೆಯಾದ ಗ್ರೂಫ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸಾಮಾನ್ಯ ಬುನಾದಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಡಳಿತಾತ್ಮಕವಾಗಿ ಹೆಚ್ಚಿನ ಸುಧಾರಣೆಯಾಗಬೇಕಾದರೆ ತಮ್ಮ ತಮ್ಮ ಕಛೇರಿ ವಿಷಯಗಳ ಕುರಿತು ಚೆನ್ನಾಗಿ ತಿಳಿದುಕೊಳ್ಳಬೇಕು ಮತ್ತು ಯಾವುದೆ ಫೈಲಿಗೆ ಸಹಿ ಮಾಡಬೇಕಾದರೆ ಅದನ್ನು ಓದಿ ತಿಳಿದುಕೊಂಡೆ ಮಾಡಬೇಕು. ಗೊತ್ತಿಲ್ಲದ ವಿಷಯಗಳ ಕುರಿತು ಚರ್ಚೆಮಾಡಿ ತಿಳಿದುಕೊಳ್ಳಬೇಕು. 42 ದಿನಗಳ ತರಬೇತಿ ಅವಧಿಯಲ್ಲಿ ತಮ್ಮ ಇಲಾಖೆಗಳ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಹೋಗಬೇಕೆಂದು ಹೇಳಿದರು.

ಈ ಹಿಂದೆ ಹಲವಾರು ಜನರು ತರಬೇತಿ ಪಡೆಯದೆ ಕೆಲಸ ಮಾಡಿದವರು ಇದ್ದಾರೆ ತಾವು ತರಬೇತಿ ಪಡೆಯುತ್ತಿರುವ ಸುದೈವಿಗಳು ಹಾಗಾಗಿ ಈ ತರಬೇತಿಯ ಲಾಭ ಪಡೆಯಬೇಕು. ಪ್ರತಿ ಸಲ ಜಿಲ್ಲಾ ತರಬೇತಿ ಸಂಸ್ಥೆಯಿಂದ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಕೆಲವೊಂದು ಇಲಾಖೆಯವರು ತಮ್ಮ ಸಿಬ್ಬಂದಿಗಳನ್ನು ಕಳಿಸುತ್ತಿರಲಿಲ್ಲ ಹಾಗಾಗಿ ಅವರನ್ನು ಕಳಿಸಲು ಆಯಾ ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ತರಬೇತಿ ವೃತ್ತಿ ಜೀವನದಲ್ಲಿ ಅತ್ಯವಶ್ಯಕ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನವರ್ ಮಾತನಾಡಿ ತರಬೇತಿ ನಮ್ಮ ವೃತ್ತಿ ಜೀವನದ ಕೊನೆ ಕ್ಷಣದವರೆಗೆ ಬೇಕು. ವೃತ್ತಿ ಜೀವನದಲ್ಲಿ ನಾವು ಮೇಲೆ ಬರಬೇಕಾದರೆ ಕೌಶಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಬೇಸಿಕ್ ಗೊತ್ತಿಲ್ಲದಿದ್ದರೆ ನಾವು ಯಾವ ತಂತ್ರಾಂಶ ಕಲಿತರು ಅದು ತಲೆಯಲ್ಲಿ ಹೋಗುವುದಿಲ್ಲ ಹಾಗಾಗಿ ಪ್ರಶಿಕ್ಷಾರ್ಥಿಗಳಿಗೆ ಬುನಾದಿ ತರಬೇತಿ ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ವತಿಯಿಂದ ಇತ್ತಿಚೆಗೆ ನೇಮಕಗೊಂಡಿರುವ ಗ್ರುಫ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳಿಗೆ ಆಗಸ್ಟ್. 5 ರಿಂದ ಸೆಪ್ಟೆಂಬರ್ 30 ರವರೆಗೆ 42 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸರಕಾರಿ ನೌಕರರು ತಮ್ಮ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಹೇಗೆ ಮಾಡಬೇಕು. ಅಧಿಕಾರಿಗಳೊಂದಿಗೆ ಹೇಗೆ ಕೆಲಸ ಮಾಡಬೇಕು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು ಎನ್ನುವ ಹಲವಾರು ವಿಷಯಗಳ ಕುರಿತು ಸಂಪನ್ಮೂಲ ವ್ಯಕಿಗಳನ್ನು ಕರೆದು ಪ್ರಶಿಕ್ಷಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತದೆ ಇದು ನಾನು ಬಂದಾಗಿನಿಂದ ನಾಲ್ಕನೇ ತರಬೇತಿ ಮಾಡುತ್ತಿದ್ದೆವೆ. ಕಲಿಕೆ ಹುಟ್ಟಿನಿಂದ ಸಾಯುವವರೆಗೆ ನಿರಂತರವಾಗಿ ಎಂದು ಹೇಳಿದರು.

ಕೃಷ್ಣಮೂರ್ತಿ ದೇಸಾಯಿ, ಮೈಲಾರ್ ರಾವ್ ಕುಲಕರ್ಣಿ, ಲಾಯಕ್ ಅಲಿ, ಎಂ.ಗುರುರಾಜ ಅವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ಗ್ರೇಡ್-2 ತಹಶಿಲ್ದಾರ ಗವಿಸಿದ್ದಪ್ಪ ಮಣ್ಣೂರ. ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ಸುರೇಶ ಜಿ. ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಬೋಧಕರಾದ ಶ್ರೀ ಧರ್ ಮತ್ತು ನರ್ಮದಾ ಸೇರಿದಂತೆ ಗ್ರುಪ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ