Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜ.29ರಂದು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ತರಬೇತಿ ಕಾರ್ಯಕ್ರಮ

ಚಿತ್ರದುರ್ಗಜ.27:

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜ.29ರಂದು ಬೆಳಿಗ್ಗೆ 10.30ಕ್ಕೆ ಹೊಸದುರ್ಗ ಪಟ್ಟಣದ ಎಪಿಎಂಸಿ ಮಾರುಕಟ್ಟೆ ರೈತ ಭವನ ಸಭಾಂಗಣದಲ್ಲಿ “ಹೊಸದುರ್ಗ ತಾಲ್ಲೂಕಿನಲ್ಲಿ ಬರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ರಾಮರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹೆಚ್.ವಿ.ಪ್ರಶಾಂತ್, ನಿರ್ದೇಶಕರಾದ ಜಿಂಕಲು ಬಸವರಾಜ್, ಜಿ.ಈ.ಅಜ್ಜಪ್ಪ, ಮಾತೃಶ್ರೀ ಎನ್.ಮಂಜುನಾಥ್, ಹೆಚ್.ಎನ್.ತಿಪ್ಪೇಸ್ವಾಮಿ, ಪ್ರಭಾವತಿ, ಡಿ.ಎಂ.ಮಹೇಶ್ವರಪ್ಪ, ಎ.ಚನ್ನಬಸಪ್ಪ, ಜಿ.ಎಸ್.ಹರೀಶ್, ಕೆ.ಜಗಣ್ಣ, ಶಿವಮೊಗ್ಗ ಹಾಲು ಒಕ್ಕೂಟ ನಿರ್ದೇಶಕರಾದ ಜಿ.ಬಿ.ಶೇಖರಪ್ಪ, ಬಿ.ಸಿ.ಸಂಜೀವಮೂರ್ತಿ, ಜಿ.ಪಿ.ರೇವಣಸಿದ್ದಪ್ಪ, ಬಿ.ಆರ್.ರವಿಕುಮಾರ್ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್, ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಶಿವಮೊಗ್ಗ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ರಂಗಸ್ವಾಮಿ ಭಾಗವಹಿಸುವರು.

ತರಬೇತಿ ಕಾರ್ಯಕ್ರಮದಲ್ಲಿ “ಲೆಕ್ಕಪತ್ರಗಳ ಆಡಳಿತಾತ್ಮಕ ನಿರ್ವಹಣೆ ಮತ್ತು ಲೆಕ್ಕಪರಿಶೋಧನೆಗೆ ಸಿದ್ಧತೆ” ಕುರಿತು ಶಿರಸಿಯ ಸನ್ನದು ಲೆಕ್ಕಪರಿಶೋಧಕ ಮಣಿಕಂಠ ನ್.ಟೆಕ್ಕೂರ್ ಉಪನ್ಯಾಸ ನೀಡುವರು. ಶುದ್ಧ ಹಾಲು ಉತ್ಪಾದನೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳುವ ಬಗ್ಗೆ ಶಿವಮೊಗ್ಗ ಹಾಲು ಒಕ್ಕೂಟಟ ವಿಸ್ತರಣಾಧಿಕಾರಿ ಕೆ.ಕೃಷ್ಣಪ್ಪ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ