Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಬ್ಬಟ್ಟು" ಚಲನಚಿತ್ರಕ್ಕೆ ಯು/ಎ ಸರ್ಟಿಫಿಕೇಟ್

ಕೀರ್ತನಾ ಮೂವ್ಹಿ ಮೇ‍ ಬೆಂಗಳೂರ ಅವರ ಲೋಕೇಶ್ ವಿದ್ಯಾಧರ   ನಿರ್ದೇಶನದ ‘ಒಬ್ಬಟ್ಟು’  ಕನ್ನಡ ಚಲನಚಿತ್ರಕ್ಕೆ ್ರ ಸೆನ್ಸಾರ್ ಮಂಡಳಿಯು ಯು/ಎ ಸರ್ಟಿಫಿಕೇಟ್ ನೀಡಿದೆ. 

        ಹಾಸ್ಯಭರಿತ ಕಥಾಸಾರ ಹೊಂದಿದ ಈ  ‘ಒಬ್ಬಟ್ಟು’ ಚಿತ್ರೀಕರಣವನ್ನು    ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕು, ಹಲಗೂರು ಹೋಬಳಿ ಸಾಗ್ಯ ಸರಗೂರು ಗ್ರಾಮದಲ್ಲಿ ಮಾಡಾಲಾಗಿದೆ. ಯುಗಾದಿ ಹಬ್ಬದಲ್ಲಿ ನಡೆಯವ ಒಂದು ಪ್ರೇಮ ಕಥೆ.  ಇಬ್ಬರು ಪ್ರೇಮಿಗಳ ಮಧ್ಯೆ ಬೀಳುವ ಒಂದು ಹೆಣದ ಸುತ್ತ ನಡೆಯುವ ಹಾಸ್ಯ ಭರಿತ ಚಿತ್ರ ಇದಾಗಿದ್ದು ಕೊಲೆ ಹೇಗಾಯಿತು ? ಯಾಕಾಯಿತು ? ಎನ್ನುವ ಕುತೂಹಲದ ನಡುವೆ ಕೊಲೆ ರಹಸ್ಯ ಭೇದಿಸುವ ಒಂದು ಹಾಸ್ಯಪೂರಿತ ಮನರಂಜನೆಯನ್ನೊಳಗೊಡ ಕಥೆ. ಒಬ್ಬಟ್ಟಿನ ರುಚಿಯನ್ನು ಥೇಟರಗಳಲ್ಲೇ ಪ್ರೇಕ್ಷಕರು ಬಂದು ನಗೆಹೂರಣದ ಸವಿಯನ್ನು ಸವಿಯಬೇಕು. ಈಗಾಗಲೇ ಮಾಸ್ ಮ್ಯೂಸಿಕ್ ಅಡ್ಡಾ ಯೂಟ್ಯೂಬ್‌ದಲ್ಲಿ ‘ಬಾರೋ ಮಗಾ ಬಾರೋ ಮಗಾ’, ‘ನನ್ನಾಕೆ ಪ್ರೀತಿ ಸಿಹಿ ಒಬ್ಬಟ್ಟಂಗೆ’ ಲಿರಿಕಲ್ ವಿಡೀಯೋ ಹಾಡುಗಳು ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ದೊರೆಯುತ್ತಿದ್ದು ಇದೀಗ ಸೆನ್ಸಾರ್ ಆಗಿದ್ದು ಶೀಘ್ರದಲ್ಲೇ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ  ಬಿಡುಗಡೆ ಮಾಡುವದಾಗಿ ನಿರ್ದೇಶಕ, ನಿರ್ಮಾಪಕ ಲೋಕೇಶ ವಿದ್ಯಾಧರ ಹೇಳುತ್ತಾರೆ. 

     ಚಿತ್ರದಲ್ಲಿ     ನಾಯಕ ಅಮೀತ್‌ರಾವ್,   ಕಿರುತೆರೆ, ಚಲನಚಿತ್ರ ಕಲಾವಿದೆ ಸುನಂದ ಕಲ್ಬುರ್ಗಿ, ಲೋಕೇಶ್ ವಿದ್ಯಾಧರ, ಮಂಡ್ಯ ನಾಗರಾಜ್, ಮುತ್ತುರಾಜ್.ಟಿ, ರಾಜು ಅರಸಿಕೆರೆ, ರೋಹಿಣಿ, ಧನಲಕ್ಷ್ಮೀ, ಮಂಜುಳಾ ಕೆಂಪೇಗೌಡ್ರು, ಸತೀಶ್ ಶೆಟ್ಟಿ,  ರವಿ ,ನಂಜಪ್ಪ ಡಿ.ಎಸ್ ಮುಂತಾದವರು ಅಭಿನಯಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ    ಛಾಯಾಗ್ರಹಣ ಬೆಟ್ಟೇಗೌಡ ಕೀಲಾರ ,     ಸ್ವರ ಸಂಯೋಜನೆ ಮತ್ತು ಹಾಡುಗಾರಿಕೆ ಎ.ಪಿ.ರವಿಕೀರ್ತಿ ,  ನೃತ್ಯ   ಅಲ್ಲಿನ್.ಎ ,  ಸಾಹಸ  ಸೂರ್ಯ ,   ಸಂಕಲನ   ಸಂಜೀವರೆಡ್ಡಿ ,   ಪ್ರಸಾಧನ ಯತೀಶ , ಸಹಕಾರ ಆನಂದ ಆರ್ಟ್ಸ,    ಪತ್ರಿಕಾ ಸಂಪರ್ಕ  ಡಾ.ಪ್ರಭು ಗಂಜಿಹಾಳ, ಡಾ. ವೀರೇಶ್ ಹಂಡಿಗಿ ,  ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಲೋಕೇಶ್ ವಿದ್ಯಾಧÀರ  ,  ನಿರ್ಮಾಪಕರು ಸುನಂದಾ ಕಲ್ಬುರ್ಗಿ ಮತ್ತು ಲೋಕೇಶ್ ವಿದ್ಯಾಧÀರ     ಆಗಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ