Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೃಷ್ಟಿಹೀನರ ಪುನರ್ವಸತಿ' ಕುರಿತು ಯುಜಿ ಡಿಪ್ಲೊಮಾ ಕೋರ್ಸ್ ಆರಂಭ

ಬಳ್ಳಾರಿ,ಜೂ.24
ಪಿಯುಸಿ ಉತ್ತೀರ್ಣರಾಗಿ ಸಮಾಜಸೇವೆಯೊಂದಿಗೆ ಉತ್ತಮ ಉದ್ಯೋಗಾವಕಾಶ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ‘ದಿ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೆöÊಂಡ್' ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ “ದೃಷ್ಟಿಹೀನರ ಪುನರ್ವಸತಿ” ವಿಷಯದಲ್ಲಿ ಪ್ರಥಮ ಬಾರಿಗೆ ಒಂದು ವರ್ಷದ ವಿಶೇಷ ಯುಜಿ ಡಿಪ್ಲೊಮಾ ಕೋರ್ಸ್ ಅನ್ನು ಪ್ರಾರಂಭಿಸಲಾಗುತ್ತಿದೆ.
ಸ್ವಯAಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಹಾಗೂ ವಿಕಲಚೇತನರ ಸಬಲೀಕರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವವರಿಗೆ ಈ ತರಬೇತಿ ಕಾರ್ಯಕ್ರಮ ಉಪಯೋಗವಾಗಲಿದೆ.
ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ವತಿಯಿಂದ ಡಿಪ್ಲೊಮಾ ಪ್ರಮಾಣಪತ್ರ ನೀಡಲಾಗುತ್ತದೆ.
ಕೋರ್ಸ್ ಮುಗಿದ ನಂತರ ಅಭ್ಯರ್ಥಿಗಳಿಗೆ ರೂ.15,000/- ಶಿಷ್ಯವೇತನದೊಂದಿಗೆ ರಾಷ್ಟಿçÃಯ ಅಂಧರ ಸಂಘದ ಸಂಸ್ಥೆಯಲ್ಲಿ ಒಂದು ವರ್ಷದ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿಯ ನಂತರದ ವರ್ಷದಿಂದ ಪ್ರತಿ ತಿಂಗಳು ರೂ.23,000/- ವೇತನದೊಂದಿಗೆ ರಾಷ್ಟಿçÃಯ ಅಂಧರ ಸಂಘ ಅಥವಾ ಇತರೆ ಪ್ರಮುಖ ಎನ್ಜಿಒಗಳಲ್ಲಿ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ ಇರುತ್ತದೆ.
ಎನ್ಜಿಒಗಳು, ಸಮಗ್ರ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರಗಳು, ಸರ್ಕಾರ ಹಾಗೂ ಸಿ.ಎಸ್.ಆರ್ ಬೆಂಬಲಿತ ವಿಕಲಚೇತನ ಸಬಲೀಕರಣ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಲು ಇದು ಉತ್ತಮ ವೇದಿಕೆಯಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅಧಿಕೃತ ವೆಬ್‌ಸೈಟ್: www.bcu.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 04 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9538653180, 6363891284, 9611924211 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮಹೊಸ ಆದಾಯ ತೆರಿಗೆ ಕಾಯ್ದೆ-2025 ಜಾಗೃತಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಆದಾಯ ತೆರಿಗೆ ಅಧಿಕಾರಿ ರಾಮನಾಥನ್ ಹೇಳಿಕೆ ಸುಲಭ ತೆರಿಗೆ ವ್ಯವಸ್ಥೆಯಿಂದ ದೇಶದ ಪ್ರಗತಿ ಸಾಧ್ಯದೃಷ್ಟಿಹೀನರ ಪುನರ್ವಸತಿ' ಕುರಿತು ಯುಜಿ ಡಿಪ್ಲೊಮಾ ಕೋರ್ಸ್ ಆರಂಭಕೃಷಿ ಇಲಾಖೆ: ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಸಲಹೆಜೂ.25 ರಂದು ತುಂಗಭದ್ರಾ ಜಲಾಶಯ ನೂತನ ಸ್ಟೀಲ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮಜೂ.25 ರಂದು ತುಂಗಭದ್ರಾ ಜಲಾಶಯ ನೂತನ ಸ್ಟೀಲ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ41 ಬೈಕ್ ಕಳವು ಪ್ರಕರಣ ಭೇದಿಸಿದ ಸಿರುಗುಪ್ಪ ಪೊಲೀಸರು; ರೂ.20.50 ಲಕ್ಷ ಮೌಲ್ಯದ ವಾಹನಗಳ ಜಪ್ತಿತುಂಗೆಯ ಅಂಗಳದಲ್ಲಿ ಹಬ್ಬದ ಸಂಭ್ರಮ * ಟಿಬಿ ಡ್ಯಾಮ್, ಮುನಿರಾಬಾದನಲ್ಲಿ ಖಾಕಿ ಪಡೆಯಿಂದ ಸರ್ಪಗಾವಲು * ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅನ್ನದಾತರ ಮೊಗದಲ್ಲಿ ಹರ್ಷಸಂಡೂರು: ಬೆಳೆ ವಿಮೆ ತಿರಸ್ಕೃತ ಪ್ರಸ್ತಾವನೆಗಳ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ