Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿಗಾಗಿ ನಗರಾಭಿವೃದ್ಧಿ ಹೋರಾಟ ಸಮಿತಿ ಪ್ರತಿಭಟನೆ..


ಸಿಂಧನೂರು: ನಗರದ ಬಸವೇಶ್ವರ ವೃತ್ತದಿಂದ ಕುಡಿಯುವ ನೀರಿಗಾಗಿ ಬಿಂದಿಗೆ ಹಿಡಿದು ನಗರಾಭಿವೃದ್ಧಿ ಹೋರಾಟ ಸಮಿತಿ  ನಗರಸಭೆ ಕಛೇರಿ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ಮಾಡಿ,ಶಾಸಕ ಹಾಗೂ ಪೌರಾಯುಕ್ತರ ವಿರುದ್ ಘೋಷಣೆ ಹಾಕುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು..


ನಗರಸಭೆ ಆಡಳಿತ ಮಂಡಳಿ, ಪೌರಾಯುಕ್ತರು ಮತ್ತು ಶಾಸಕರ ದಿವ್ಯ ನಿರ್ಲಕ್ಷತನದಿಂದ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.  ಇವರು ಅಚ್ಚುಕಟ್ಟಾಗಿ ಕಾರ್ಯ ನಿರ್ವಿಸಿದ್ದರೆ ನಗರದ ಜನತೆ ಕುಡಿಯುವ ನೀರಿಗಾಗಿ ಹಲೆದಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಯಶಸ್ವಿಯಾಗಿ ಸಮಿತಿಯ ಮುಖಂಡರು   ಪೊಲೀಸ್ ಬ್ಯಾರಿಕೆಟ್ ಮುರಿದು ನಗರಸಭೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ಭಾಗಷಃ ಯಶಸ್ವಿಯಾದರು. 


ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಅಧಿಕಾರಿಗಳು ಮತ್ತು ನಗರಸಭೆಯ ಪೌರಾಯುಕ್ತರು ಆಗಮಿಸಿ ನೀರಿನ ಸಮಸ್ಯೆ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ನಗರ ಅಭಿವೃದ್ಧಿ ಹೋರಾಟ ಸಮಿತಿಯ ಮುಖಂಡರು ಪಟ್ಟು ಹಿಡಿದರು. ನಂತರ ಕೇವಲ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು. ಈ ಹೋರಾಟ ನಗರ ಅಭಿವೃದ್ಧಿ ಹೋರಾಟಗಾರರಿಗೆ ಹುಮ್ಮಸ್ಸು ಹೆಚ್ಚಾಗಿದ್ದು ಮುಂದಿನ ದಿನಮಾನಗಳಲ್ಲಿ ಇದು ಯಾವ ರೀತಿ ರೂಪ ಪಡೆದು ನೀರಿನ ಸಮಸ್ಯೆ ನಿವಾರಣೆ  ಆಗುತ್ತದೆ ಎಂದು ಕಾದು ನೋಡಬೇಕು. ಈ ಸಂಧರ್ಭದಲ್ಲಿ ಮುಖಂಡರಾದ ಡಿ.ಹೆಚ್ ಕಂಬಳಿ, ಎಸ್ ದೇವೇಂದ್ರಗೌಡ, ಡಾ.ಶಿವರಾಜ್, ಸರಸ್ವತಿ ಪಾಟೀಲ್, ನಾಗರಾಜ ಪೂಜಾರ್,ದೌಲಸಾಬ್ ದೊಡ್ಡಮನಿ,ಬಸವರಾಜ್ ಬಾದರ್ಲಿ, ಶಂಕರ ಗುರಿಕಾರ್ ಸೇರಿದಂತೆ ಅನೇಕರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ