Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ: ಎನ್ ಚೆಲುವರಾಯಸ್ವಾಮಿ


ರೈತರು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.



ಇಂದು (ಮಾ.24) ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ವತಿಯಿಂದ ನಡೆದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೃಷಿ ಕವಚ ಕಾರ್ಯಕ್ರಮದ ಕೃಷಿ ಇಲಾಖೆ ಯೋಜನೆಗಳ ಒಗ್ಗೂಡಿತ ಬದು ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಕೃಷಿಯ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಲು ಇಂತಹ ಕಾರ್ಯಾಗಾರಗಳು ಅತ್ಯಗತ್ಯ ಎಂದು ಹೇಳಿದರು.



ಭಾರತದ ಮಾಜಿ ಪ್ರಧಾನಿ ಹಾಗೂ ಶ್ರೇಷ್ಠ ಅರ್ಥಶಾಸ್ತ್ರಜ್ಞ ದಿವಂಗತ ಡಾ. ಮನ ಮೋಹನ್ ಸಿಂಗ್ ರವರು ಪ್ರಥಮ ಬಾರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ಗೊಳಿಸಿದರು, ದೇಶದ ಯಾವುದೇ ಪ್ರಜೆಯೂ ಹಸಿವಿನಿಂದ ಬಳಲಬಾರದೆಂದು ಆಹಾರ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.



ಬೇಸಿಗೆ ಕಾಲದಲ್ಲಿ ಹೆಚ್ಚಿನ ನೀರಿನ ಸಮಸ್ಯೆ ಉದ್ಭವಿಸುತ್ತದೆ, ಇದರಿಂದ ಬೆಳೆಹಾನಿ ಸಂಭವ ಹೆಚ್ಚು, ಮೊದಲ ಹಂತದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನೀರಿನ ಕೊರತೆ ಇರುವ ರಾಜ್ಯದ 104 ತಾಲ್ಲೂಕುಗಳಲ್ಲಿ ಕೃಷಿ ಹೊಂಡ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈಗ 224 ತಾಲ್ಲೂಕುಗಳಲ್ಲೂ ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು ಜಾರಿಗೆ ತರಲಾಯಿತು.ಇದರಿಂದ ನೀರಿನ ಕೊರತೆಯಾದ ಸಂದರ್ಭದಲ್ಲಿ 15-30 ದಿನಗಳ ಅವಧಿಗೆ ಕೃಷಿಗೆ ನೀರನ್ನು‌ ನೀಡಬಹುದು ಎಂದರು.



ಕೃಷಿ ಇಲಾಖೆಯಲ್ಲಿ ರೈತರಿಗೆ ಹಲವಾರು ಯೋಜನೆಗಳಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಾಲ್ಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಮನರೇಗಾ ಯೋಜನೆ ಕುರಿತು ಕಾರ್ಯಾಗಾರ ನಡೆಸಿ ಹೆಚ್ಚಿನ ಸಾಧನೆ ಮಾಡುವಂತೆ ತಿಳಿಸಿದರು.



ಸರ್ಕಾರ ಬಡವರು, ಹಿಂದುಳಿದ ಹಾಗೂ ಮಹಿಳೆಯರ ಜೀವನ ಸುಧಾರಿಸಲು ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಯಿತು. ಇಂತಹ ಯೋಜನೆಯನ್ನು ಈ ಹಿಂದೆ ಯಾವುದೇ ಸರ್ಕಾರ ಜಾರಿಗೆ ತಂದಲ್ಲಿ. ಪಂಚ ಗ್ಯಾರಂಟಿ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತರುವ ಮೂಲಕ ಹೃದಯ ಶ್ರೀಮಂತಿಕೆಯನ್ನು ಮೆರೆದಿದೆ ಎಂದರು.



ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ತಾಲ್ಲೂಕಿಗೆ ಒಂದು ವರ್ಷಕ್ಕೆ ರೂ 230 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಗೆ ಒಂದು ವರ್ಷದಲ್ಲಿ ಪಂಚ ಗ್ಯಾರಂಟಿ ಯೋಜನೆಗಾಗಿ 1610 ಕೋಟಿ ರೂ ವೆಚ್ಚವಾಗುತ್ತದೆ. ಈ ಯೋಜನೆಯಲ್ಲಿ ಯಾವುದೇ ಮದ್ಯವರ್ತಿಗಳಲ್ಲಿ ನೇರವಾಗಿ ಹಣ ಪೋಲಾಗದೆ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವಾರು ಅಭಿವೃದ್ಧಿ ಕೆಲಸಗಳು ಸಹ ನಿರಂತರವಾಗಿ ನಡೆಯುತ್ತಿದೆ ಎಂದರು.



ಸಭೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೈಷುಗರ್ ಅಧ್ಯಕ್ಷ ಗಂಗಾಧರ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳು ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವ, ಮಂಡ್ಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ.ಕೆ. ಎಂ. ಹರಿಣಿ ಕುಮಾರ್, ನರೇಗಾ ಆಯುಕ್ತಾಲಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ