Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭೆಗಳನ್ನು ಪ್ರೋತ್ಸಾಹಿಸುವುದೇ ಪಂಚಮಸಾಲಿ ಸಮಾಜದ ಧ್ಯೇಯ : ವಚನಾನಂದ ಶ್ರೀ

 ಕೊಟ್ಟೂರು : ಪ್ರತಿಭೆಗಳನ್ನು ಪ್ರೋತ್ಸಾಹಿಸುವುದೇ ಪಂಚಮಸಾಲಿ ಸಮಾಜದ ಧ್ಯೇಯವಾಗಿದೆ. ಎಂದು ಹರಿಹರ ಪೀಠದ ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು.

 ಪಟ್ಟಣದ ಮಹದೇವ ಶಾಲಾ ಆವರಣದಲ್ಲಿ ವೀರಶೈವ ಪಂಚಮಸಾಲಿ ಸಮಾಜದಿಂದ  ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

 ಸಮಾಜದ ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ್‍ಯಾಂಕ್ ತಂದಿರುವುದು ಸಂತೋಷದ ಸಂಗತಿ. ಹರಿಹರ ಪೀಠ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಕೇಂದ್ರದ ಓಬಿಸಿ ಪಟ್ಟಿಯಲ್ಲಿ ಸೇರಬೇಕು ಎನ್ನುವುದು ಮಹಾದಾಶೆಯಾಗಿದೆ. ಈ ನಿರ್ಣಯ ಕೋರ್ಟ್ ಹಂತದಲ್ಲಿದ್ದು, ಒಂದು ವೇಳೆ ಜಾರಿಯಾದರೆ ನಮ್ಮ ಮಕ್ಕಳು ಉನ್ನತ  ಐಎಎಸ್, ಐಪಿಎಸ್ ಹಾಗೂ ನೀಟ್ ಪರೀಕ್ಷೆಗಳಿಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸದಾಕಾಲ ಪೀಠವು ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿರುತ್ತದೆ. ಎಂದರು 

 ಪಂಚಮಸಾಲಿ ಸಮಾಜದ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಚನ್ನಬಸವನಗೌಡ ಮಾತನಾಡಿ ಎಲ್ಲಾ ಸಮಾಜಗಳಲ್ಲಿ ಉತ್ತಮ ಬಾಂಧವ್ಯ ಹೊಂದಿದ ಸಮಾಜವೇ  ವೀರಶೈವ ಪಂಚಮಸಾಲಿ ಸಮಾಜವಾಗಿದೆ. ಎಂದರು

 ವೀರಶೈವ ಪಂಚಮಸಾಲಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷರಾದ ಬಾವಿಬೆಟ್ಟಪ್ಪ ಮಾತನಾಡಿ ಸಮಾಜದಿಂದ 2004 ರಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದರಿಂದ ನಮ್ಮ ಸಮಾಜಕ್ಕೆ ಒಳ್ಳೆಯ ಹೆಸರು ಮತ್ತು ಕೀರ್ತಿ ದೊರೆತು ಸಮಾಜ ವಿಸ್ತರಣೆಯಾಗಲಿ ಎಂದು ಹೇಳಿದರು.

 ಈ ವೇಳೆ ಶ್ರೀಗಳು ಪ್ರಸಕ್ತ ಸಾಲಿನಲ್ಲಿ ರಾಜ್ಯಮಟ್ಟಕ್ಕೆ ಮೊದಲ ಹಾಗೂ ಹತ್ತನೇ ರ್‍ಯಾಂಕ್ ಗಳಿಸಿದ ಇಂದು  ಕಾಲೇಜಿನ ವಿದ್ಯಾರ್ಥಿಗಳಾದ ಬಿವಿ ಕವಿತಾ ಹಾಗೂ ಅಮೃತ ರನ್ನು ಸನ್ಮಾನಿಸಿದರು. ತಾಲೂಕಿನ ಸಮಾಜದ ಐದು  ಪ್ರಗತಿಪರ ರೈತರನ್ನು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ನಿವೃತ್ತ ನೌಕರರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಪಂಚಮಸಾಲಿ ಸಮಾಜದ ಚಾಪಿ ಚಂದ್ರಪ್ಪ, ಕೊಟ್ರಪ್ಪ ಎಚ್ ರೇವಣ್ಣ ಕಲ್ಲೇಶಪ್ಪ ಇಂಜಿನಿಯರ್ ಅಶೋಕ್ ಮುಕೇಶ  ಇಂದು ಕಾಲೇಜಿನ ಎಚ್ ಎನ್ ವೀರಭದ್ರಪ್ಪ, ಬಿ ಪಂಪಾಪತಿ ಹಾಗೂ ಸಮಾಜದ ಬಂಧು ಬಾಂಧವರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ