Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು: ಮಾರ್ಚ್ 21 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಕೊಪ್ಪಳ ಮಾರ್ಚ್ 20: ತುಂಗಭದ್ರಾ ಯೋಜನೆಯ ಎಡದಂಡೆ ಕಾಲುವೆ ಹಾಗೂ ಬಲದಂಡೆ ಕೆಳ ಮಟ್ಟದ ಕಾಲುವೆಯಡಿ ಹಿಂಗಾರು ಹಂಗಾಮಿಗೆ ಬೆಳೆದು ನಿಂತ ಬೆಳೆಗಳಿಗೆ ಕೊರತೆಯಾಗುವ ನೀರನ್ನು ಒದಗಿಸಲು 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಮಾರ್ಚ್ 21 ರಂದು ಅಪರಾಹ್ನ 4 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿಂಗಾರು ಹಂಗಾಮಿನಲ್ಲಿ ಲಭ್ಯವಾದ, ಬಳಕೆಯಾದ ಮತ್ತು ಉಳಿತಾಯವಾಗುವ ನೀರನ್ನು ನಿಂತ ಬೆಳೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ಜಲಸಂಪನ್ಮೂಲ ಇಲಾಖೆ ಸಚಿವರು ಆಗಿರುವ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಉಪಸ್ಥಿತಿ ವಹಿಸುವರು.

ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ