Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ರಕ್ತದಾನಿಗಳ ದಿನಾಚರಣೆ

ಮಾನ್ವಿ:ಪಟ್ಟಣದ ಗಂಗಾಮತಸ್ಥರ ಸಮುದಾಯ ಭವನದಲ್ಲಿ ವಿಶ್ವಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆ, ರಿಮ್ಸ್ ರಕ್ತ ಭಂಡರ, ಅಪ್ಪು ಅಭಿಮಾನಿ ಬಳಗ, ತಾ.ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಹೆಚ್.ಡಿ.ಎಫ್ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ತಾಲೂಕು ಅರೋಗ್ಯಾಧಿಕಾರಿ ಡಾ.ಶರಣಬಸವ ಚಾಲನೆ ನೀಡಿ ಮಾತನಾಡಿ ದಾನಗಳಲ್ಲಿಯೇ ಅತ್ಯಂತ ಶ್ರೇಷ್ಟವಾದ ದಾನ ರಕ್ತದಾನವಾಗಿದ್ದು ದಾನಿಗಳು ನೀಡುವ 300 ಮಿ.ಲಿ.ಯಷ್ಟು ರಕ್ತವು ತುರ್ತು ಸಂದರ್ಭದಲ್ಲಿ ನಾಲ್ಕು ಜನರ ಪ್ರಾಣವನ್ನು ಉಳಿಸಬಲ್ಲದು.ರಕ್ತವನ್ನು ಕೃತಕವಾಗಿ ತಯಾರಿಸಲು ಇದುವರೆಗೂ ಸಾಧ್ಯವಾಗಿಲ್ಲ ಅದರಿಂದ ಅರೋಗ್ಯವಂತ ದಾನಿಗಳಿಂದ ಪಡೆದ ರಕ್ತವನ್ನು ಅಪಘಾತ, ಗರ್ಭಿಣಿಯರಿಗೆ ಹೆರಿಗೆ ಸಮಯದಲ್ಲಿ, ರಕ್ತಹಿನತೆಯಿಂದ ಬಳಲುತ್ತಿರುವವರಿಗೆ ನೀಡುವ ಮೂಲಕ ಜೀವವನ್ನು ಉಳಿಸುವುದಕ್ಕೆ ಸಾಧ್ಯವಾಗುವುದರಿಂದ ಪ್ರತಿಯೊಬ್ಬರೋಗ್ಯವಂತರು ಕೂಡ 6 ತಿಂಗಳಿಗೆ ಒಮ್ಮೆ ರಕ್ತವನ್ನು ದಾನ ಮಾಡಬೇಕು ಎಂದು ತಿಳಿಸಿದರು.
ರಕ್ತದಾನ ಶಿಬಿರದಲ್ಲಿ ಅಪ್ಪು ಅಭಿಮಾನಿ ಬಳಗದ ತಾ.ಗೌರವ ಅಧ್ಯಕ್ಷ ಕೆ ಸಾಜೀದ್ ಬಾಷಾ, ತಾ.ಅಧ್ಯಕ್ಷ ರೇಣುಕರಾಜ್, ಸದಸ್ಯರಾದ ರಾಜೇಶ್,ಮೋತಿ ರಾಘವೇಂದ್ರ,ಕೊAಡನಾಯಕ್, ಬಂಟಿ,ನಾಗರಾಜ, ಬಸವರಾಜಸ್ವಾಮಿ,ನಾಗು ಕುಂಬಾರ, ಅಮರೇಶ್, ಸಂದೀಪ್, ತಾ.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೆಹಬೂಬ್ ಮದ್ಲಾಪೂರ್, ರಿಮ್ಸ್ ರಕ್ತ ಭಂಡರದ ವೈದ್ಯರಾದ ಡಾ.ರಾಜಶ್ರೀ,ಡಾ.ಯಶವಂತ್ ಮುದಗಲ್, ಡಾ.ಯಶ್ವಿನ್ ಸೆಬರ್‌ನಾಥ್, ಡಾ.ಐಶ್ವರ್ಯ ಜೀ, ಸಿಬ್ಬಂದಿಗಳಾದ ರವಿಕುಮಾರ,ಲೋಕಪ್ಪ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ರಕ್ತಶೇಖರಣ ಘಟಕದ ತಂತ್ರಜ್ಞಾನರಾದ ಶ್ರೀದೇವಿ,ಹೆಚ್.ಡಿ.ಎಫ್ ಬ್ಯಾಂಕಿನ ಕಾರ್ಯನಿರ್ವಹಕ ವ್ಯವಸ್ಥಾಪಕರಾದ ವೀರೇಶ್ ಸೇರಿದಂತೆ ಇನ್ನಿತರರು ಇದ್ದರು.

ಮಾನ್ವಿ:ಪಟ್ಟಣದ ಗಂಗಾಮತಸ್ಥರ ಸಮುದಾಯ ಭವನದಲ್ಲಿ ವಿಶ್ವಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ