Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಸಿರುಗುಪ್ಪ31 ತಂಬಾಕು ಸೇವನೆಯಿಂದ ದೇಹದ ಮೇಲೆ ಅನೇಕ ದುಷ್ಪರಿಣಾಮಗಳು ಬೀರಲಿದ್ದು, ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸ್ರ್, ಹೃದಯಾಘಾತ ಮುಂತಾದ ರೋಗಗಳು ಹರಡುತ್ತವೆ, ಇದರಿಂದ ತಂಬಾಕು ಸೇವನೆ ಮಾಡುವವರು ನುರಿತ ತಜ್ಞರಿಂದ ಸಲಹೆ ಪಡೆದು ತಂಬಾಕು ಸೇವನೆಯನ್ನು ಅತಿ ಶೀಘ್ರವಾಗಿ ಬಿಡಬೇಕೆಂದು ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಹಾಜಿ ಹುಸೇನ್ ಸಾಬ್ ಯಾದವಾಡ ಕರೆನೀಡಿದರು.
ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚೆಗೆ ತಂಬಾಕು ಸೇವನೆಯು ಸಮಾಜದಲ್ಲಿ ಹೆಮ್ಮರವಾಗಿ ಬೆಳೆದು ನಿಂತಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬoತೆ ಈಗಿನ ಮಕ್ಕಳಿಗೆ ಶಾಲಾ ಪಾಠದೊಂದಿಗೆ ಸಮಾಜದಲ್ಲಿ ಅನುಸರಿಸಬೇಕಾದ ನೈತಿಕ ಪಾಠದ ಅಗತ್ಯವಿದೆ.
ಸಾರ್ವಜನಿಕ ಸ್ಥಳಗಳಾದ ಬಸ್‌ನಿಲ್ದಾಣ, ಚಿತ್ರಮಂದಿರ, ಆಸ್ಪತ್ರೆ, ಸರ್ಕಾರಿ ಕಚೇರಿಗಳು, ವಿದ್ಯಾಲಯಗಳು ಇನ್ನಿತರ ಕಡೆಗಳಲ್ಲಿ ಯಾರಾದರೂ ದೂಮಪಾನ ಹಾಗೂ ತಂಬಾಕು ಸೇವನೆ ಮಾಡುವುದನ್ನು ಕಂಡುಬAದಲ್ಲಿ ಒಗ್ಗಟ್ಟಿನಿಂದ ವಿರೋಧಿಸಬೇಕೆಂದು ತಿಳಿಸಿದರು.
ಹಿರಿಯ ವಕೀಲರಾದ ಎನ್.ಅಬ್ದುಲ್‌ಸಾಬ್, ಮಲ್ಲಿಗೌಡ, ಟ.ಹೆಚ್.ಒ. ಡಾ.ಈರಣ್ಣ ಮಾತನಾಡಿದರು. ವಕೀಲರ ಸಂಘದ ತಾ.ಅಧ್ಯಕ್ಷ ಎಸ್.ಮಂಜನಾಥಗೌಡ, ಕಾರ್ಯದರ್ಶಿ ಎಚ್.ಪ್ಯಾಟೆಗೌಡ, ವಕೀಲರಾದ ಟಿ.ವೆಂಕಟೇಶ ನಾಯ್ಕ್, ದೊಡ್ಡನಗೌಡ, ಬಾಬುಖಾನ್, ನೆಲಗುಂಟಯ್ಯ, ಜಗದೀಶಸ್ವಾಮಿ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ