Ad image

ಏ.05 ರಂದು ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಕಾರ್ಯಕ್ರಮ

Vijayanagara Vani
ಬಳ್ಳಾರಿ,ಏ.04
ಜಿಲ್ಲಾಡಳಿತದಿಂದ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಕಾರ್ಯಕ್ರಮವನ್ನು ಏ.05 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಡಾ.ಬಾಬು ಜಗಜೀವನ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ‌ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರ, ಸ್ತಬ್ಧಚಿತ್ರಗಳನ್ನೊಳಗೊಂಡ ಭವ್ಯ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ-ಬ್ರೂಸ್‌ಪೇಟೆ ಠಾಣೆ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಸಾಗಿಬರಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಕೋರಿದ್ದಾರೆ

Share This Article
error: Content is protected !!
";