ತಲೆಮರೆಸಿಕೊಂಡಿರುವ ಆರೋಪಿ ಬಗ್ಗೆ ಮಾಹಿತಿ ನೀಡಲು ಮನವಿ

Vijayanagara Vani
ತಲೆಮರೆಸಿಕೊಂಡಿರುವ ಆರೋಪಿ ಬಗ್ಗೆ ಮಾಹಿತಿ ನೀಡಲು ಮನವಿ

ಶಿವಮೊಗ್ಗ, ಜೂನ್ 24 ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ

WhatsApp Group Join Now
Telegram Group Join Now
Share This Article
error: Content is protected !!