ವಿದ್ಯಾರ್ಥಿಗಳು ಅಭ್ಯಾಸದ ಮೂಲಕ ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಸಿಇಒ ಪಾಂಡ್ವೆ ರಾಹುಲ್ ತುಕಾರಾಮ

Vijayanagara Vani
ವಿದ್ಯಾರ್ಥಿಗಳು ಅಭ್ಯಾಸದ ಮೂಲಕ ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಸಿಇಒ ಪಾಂಡ್ವೆ ರಾಹುಲ್ ತುಕಾರಾಮ

ರಾಯಚೂರು,ಮೇ.31ಜಿಲ್ಲೆಯ ರಾಯಚೂರು ತಾಲೂಕಿನ ಗಿಲ್ಲೇಸೂಗುರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ದುಗುನೂರು ಗ್ರಾಮದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.

 

2024-25ನೇ ಸಾಲಿನ ಶೈಕ್ಷಣಿಕ ಬಲವರ್ಧನೆ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ ರವರು ಉದ್ಘಾಟಿಸಿದರು.

ನಂತರ ಮಾತಾನಾಡಿದ ಅವರು, ಮಕ್ಕಳು ಪ್ರತಿ ನಿತ್ಯ ಶಾಲೆಗೆ ಬರುವ ಮೂಲಕ ಶಿಕ್ಷಕರು ಹೇಳಿ ಕೊಡುವ ಪಾಠವನ್ನು ಶ್ರದ್ಧೆಯಿಂದ ಆಲಿಸಿ, ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಜೊತೆಗೆ ಶೈಕ್ಷಣಿಕ ಸ್ಥಿತಿ ಉತ್ತಮ ಮಾಡಿಕೊಳ್ಳಲು ಸಲಹೆ ನೀಡಿ, ಮಕ್ಕಳು ಸರಕಾರಿ ಸೌಲಭ್ಯ ಪಡೆದು ಗುಣಮಟ್ಟದ ಶಿಕ್ಷಣ ಪಡೆಯಲು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಣಣಾಧಿಕಾರಿಗಳಾದ ಚಂದ್ರಶೇಖರ ಬಂಡಾರಿ, ಉಪನಿರ್ದೇಶಕರಾದ ಕೆ.ಡಿ ಬಡಿಗೇರ್, ಕ್ಷೇತ್ರ ಸಮನ್ವಯಾಧಿಕಾರಿ ವೆಂಕೋಬ, ಶಿಕ್ಷಣ ಸಂಯೋಜಕ ರಾಘವೇಂದ್ರ, ಸಂಪನ್ಮೂಲ ವ್ಯಕ್ತಿ ಸಂತೋಷ ಶಾಲಾ ಮಕ್ಕಳ ಪಾಲಕರಾದ ನರಸಪ್ಪ, ಶಿವರಾಮ, ಬನ್ನೆಪ್ಪ, ಸೂರಪ್ಪಗೌಡ, ಗ್ರಾಮ ಪಂಚಾಯತ್ ಅಧಿಕಾರಿಗಳು, ಶಾಲಾ ಮುಖ್ಯಗುರುಗಳು ಗಫೂರ್, ಸಹ ಶಿಕ್ಷಕರು ಚಂದ್ರಶೇಖರ ನಾಯಕ್, ಸಂಪತರಾಜ್, ನರಸಮ್ಮ, ಹಾಗೂ ಮುದ್ದು ಮಕ್ಕಳು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article
error: Content is protected !!