ಮುಂದುವರೆದ ಮಳೆ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಮುನ್ನೆಚ್ಚರ ವಹಿಸಿ: ಜಿಲ್ಲಾಧಿಕಾರಿ

Vijayanagara Vani
ಮುಂದುವರೆದ ಮಳೆ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಮುನ್ನೆಚ್ಚರ ವಹಿಸಿ: ಜಿಲ್ಲಾಧಿಕಾರಿ
ಮಡಿಕೇರಿ ಜು.30ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಸುರಕ್ಷಿತ ಸ್ಥಳ/ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿದರ್ೇಶನ ನೀಡಿದ್ದಾರೆ.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ವಿಡಿಯೋ ಸಂವಾದ ಮೂಲಕ ಮಂಗಳವಾರ ವಿವಿಧ ಹಂತದ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಈ ಹಿನ್ನೆಲೆ ಸೋಮವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿದರ್ೇಶನ ನೀಡಿದರು.
ತಹಶೀಲ್ದಾರರು, ತಾ.ಪಂ.ಇಒಗಳು ಹಾಗೂ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಪ್ರವಾಹ ಮತ್ತು ಭೂಕುಸಿತ ಪ್ರದೇಶದಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ /ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವ ಜೊತೆಗೆ ಕಾಳಜಿ ಕೇಂದ್ರದಲ್ಲಿ ಅಗತ್ಯ ಮೂಲಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಗ್ರಾ.ಪಂ.ಗೆ ಹಣ ಬಿಡುಗಡೆ ಮಾಡಲಾಗುವುದು. ಜನ-ಜಾನುವಾರು ಆಸ್ತಿ ಪಾಸ್ತಿ ರಕ್ಷಣೆ ಮಾಡುವುದು ಅತೀಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ತಮ್ಮ ತಮ್ಮ ಹಂತದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವನ್ನು ನಿಯೋಜಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಅರಣ್ಯ, ಅಗ್ನಿಶಾಮಕ, ಸೆಸ್ಕ್, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ವಿಭಾಗ ಹೀಗೆ ಪ್ರತೀ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಸೂಕ್ಷ್ಮ ಪ್ರದೇಶದ ಜನರನ್ನು ಸ್ಥಳಾಂತರಿಸಬೇಕು ಎಂದು ಹೇಳಿದರು.
ಭಾರತೀಯ ಹವಾಮಾನ ಇಲಾಖೆ ಮಳೆ ಸಂಬಂಧ ಕಾಲ ಕಾಲಕ್ಕೆ ಹೊರಡಿಸುವ ಮಾಹಿತಿಯನ್ನು ಎಲ್ಲೆಡೆ ಹಂಚಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಕಳೆದ 20 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಎಚ್ಚರವಹಿಸಬೇಕಿದೆ ಎಂದರು ಹೇಳಿದರು.
ಹತ್ತಿರದ ವಯನಾಡು ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಪ್ರಾಣಹಾನಿ ಹಾಗೂ ಸಾಕಷ್ಟು ನಷ್ಟ ಉಂಟಾಗಿದೆ. ಆದ್ದರಿಂದ ಜನ ಜಾನುವಾರು ರಕ್ಷಣೆಗೆ ಮುಂದಾಗಬೇಕು. ಸೋಮವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಸಿ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ದುಬಾರೆ, ನಿಸರ್ಗಧಾಮ, ಮತ್ತಿತರ ಪ್ರವಾಸಿ ಸ್ಥಳಗಳಲ್ಲಿ ಸೂಕ್ತ ರಕ್ಷಣೆ ಇರಬೇಕು. ಅನಿವಾರ್ಯವಾದಲ್ಲಿ ನಿರ್ಬಂಧ ಹೇರಬೇಕು. ಈ ಸಂಬಂಧ ಮೊದಲೇ ಪತ್ರಿಕಾ ಪ್ರಕಟಣೆ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಪ್ರವಾಸಿ ಸ್ಥಳಗಳಲ್ಲಿ ಸುರಕ್ಷತೆ ಅತೀಮುಖ್ಯ. ಆ ನಿಟ್ಟಿನಲ್ಲಿ ಅಗತ್ಯ ಜಾಗೃತಿ ವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ವಾರಾಂತ್ಯದಲ್ಲಿ ಇನ್ನಷ್ಟು ಎಚ್ಚರವಹಿಸಬೇಕು ಎಂದು ತಿಳಿಸಿದರು. ತುತರ್ು ಇದ್ದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಾಕೃತಿಕ ವಿಕೋಪ ಎದರುಸುವಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತದ ಜೊತೆ ಸದಾ ಸನ್ನದ್ಧವಾಗಿದ್ದು, ಸ್ಥಳೀಯ ಮಟ್ಟದಲ್ಲಿ ಪೊಲೀಸ್ ಇಲಾಖೆಯು ಸಹ ಅಗತ್ಯ ಸಹಕಾರ ನೀಡಲಿದ್ದಾರೆ ಎಂದರು.
ಪೊಲೀಸ್ ಇಲಾಖೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಮಾಹಿತಿ ಸಂಪನ್ಮೂಲವಿದ್ದು, ಅದನ್ನು ಬಳಸಿಕೊಂಡು ಯಾವುದೇ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದರು.
ಕಳೆದ ಬಾರಿ ಅನಾವೃಷ್ಟಿ, ಈ ಬಾರಿ ಅತೀವೃಷ್ಟಿಯಾಗಿದೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ತಾ.ಪಂ.ಇಒಗಳು ಪ್ರಾಕೃತಿಕ ವಿಕೋಪ ನಿಭಾಯಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಭಾಸ್ಕರ್ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನ ಭೂಕುಸಿತ ಪ್ರದೇಶದಲ್ಲಿ ಕಂದಾಯ ಇಲಾಖೆ ಜೊತೆ ಕೈಜೋಡಿಸಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಹಾಗೆಯೇ ಮತ್ತೊಬ್ಬ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅವರು ಪ್ರವಾಹ ಹಾಗೂ ಭೂಕುಸಿತ ಪ್ರದೇಶದಲ್ಲಿನ ಜನರ ಸ್ಥಳಾಂತರಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನವರ್ಾಡೆ, ತಾ.ಪಂ.ಇಒಗಳಾದ ಅಪ್ಪಣ್ಣ, ಶೇಖರ್, ತಹಶೀಲ್ದಾರರಾದ ರಾಮಚಂದ್ರ, ಪ್ರವೀಣ್ ಕುಮಾರ್ ಇತರರು ಪ್ರಾಕೃತಿಕ ವಿಕೋಪ ಸಂಬಂಧ ಹಲವು ಮಾಹಿತಿ ನೀಡಿದರು.
WhatsApp Group Join Now
Telegram Group Join Now
Share This Article
error: Content is protected !!