Ad image

ಗಯಾನ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯನ ಮೃತ ದೇಹ ಭಾರತಕ್ಕೆ ಕರೆತರಲು ಕರ್ನಾಟಕ ಸರ್ಕಾರದ ವತಿಯಿಂದ ಆರ್ಥಿಕ ಸಹಾಯ

Vijayanagara Vani
*ಬೆಂಗಳೂರು, ಜುಲೈ 23:
ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿಯಾದ ಪಿ.ಬಿ ಗಿರೀಶ ಬಾಬು ಪಾಲೆ ರವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶೆರಿಫ್ ಜನರಲ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸುಮಾರು ಎರಡು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು.2025ನೇ ಜುಲೈ 03 ರಂದು ಅನಾರೋಗ್ಯ ಕಾರಣದಿಂದ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ, ಪಿ.ಬಿ ಗಿರೀಶ ಬಾಬು ಪಾಲೆ ರವರು ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ 2025 ನೇ ಜುಲೈ 14 ರಂದು ಸಾವನ್ನಪ್ಪಿರುತ್ತಾರೆ. ಆನಂತರ ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗು ಭಾರತೀಯ ರಾಯಭಾರಿ ಕಛೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಿ.ಬಿ ಗಿರೀಶ ಬಾಬು ಪಾಲೆ ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರುವ ಕಾರ್ಯವನ್ನು ಪ್ರಾರಂಭಿಸಲಾಯಿತು.
ಮೃತನ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸುಮಾರು ರೂ. 12,00,000/-(ಹನ್ನೆರೆಡು ಲಕ್ಷಗಳು ಮಾತ್ರ) ಗಳಾಗಬಹುದೆಂದು ರಾಯಭಾರಿ ಕಛೇರಿ ತಿಳಿಸಿದ್ದು, ಶ್ರೀಮತಿ ಜಾನಕಿ. ಕೆ.ಎನ್. W/o ಪಿ.ಬಿ ಗಿರೀಶ ಬಾಬು ಪಾಲೆ, ರವರು ತಮಗೆ 2 ವರ್ಷದ ಒಬ್ಬ ಮಗನಿದ್ದು ಹಾಗೂ ಕುಟುಂಬವು ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರದ ವತಿಯಿಂದ ಸಹಾಯಕ್ಕಾಗಿ ಈ ಕಛೇರಿಗೆ ಮನವಿ ಸಲ್ಲಿಸಿದ್ದರು.
ಅನಿವಾಸಿ ಭಾರತೀಯ ಸಮಿತಿಯಿಂದ ಪಿ.ಬಿ ಗಿರೀಶ ಬಾಬು ರವರ ಮೃತ ದೇಹವನ್ನು ಭಾರತಕ್ಕೆ ಕರೆತರಲು ತಗಲುವ ವೆಚ್ಚವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಧನ ಸಹಾಯ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಕೋರಲಾಗಿತ್ತು. ಇದಕ್ಕೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರದ ವತಿಯಿಂದ ರೂ 3,60,000/- (ಮೂರು ಲಕ್ಷ, ಅರವತ್ತು ಸಾವಿರ ಮಾತ್ರ)ಗಳನ್ನು ಮಂಜೂರು ಮಾಡಿರುತ್ತಾರೆ. ಉಳಿಕೆ ಹಣವನ್ನು ಪಿ.ಬಿ ಗಿರೀಶ ಬಾಬು ಪಾಲೆ ರವರು ಕೆಲಸ ಮಾಡುತ್ತಿದ್ದ ಶೆರಿಫ್ ಜನರಲ್ ಆಸ್ಪತ್ರೆಯವರು ಭರಿಸುತ್ತಿದ್ದು ಗಯಾನದಲ್ಲಿರುವ ಭಾರತೀಯ ರಾಯಭಾರಿ ಕಛೇರಿ ಹಾಗೂ ನವ ದೆಹಲಿಯಲ್ಲಿರುವ ನಿವಾಸಿ ಆಯುಕ್ತರು ಮೃತದೇಹವನ್ನು ಭಾರತಕ್ಕೆ ತರುವುದನ್ನು ಸಂಯೋಜಿಸುತ್ತಿದ್ದು ಶೀಘ್ರದಲ್ಲೇ ತರಲಿದೆಯೆಂದು ಕರ್ನಾಟಕಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದಗದಾರೆ

Share This Article
error: Content is protected !!
";