Ad image

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಕಾರ್ಯಕ್ರಮ

Vijayanagara Vani
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಕಾರ್ಯಕ್ರಮ

ಬಳ್ಳಾರಿ,ನ.26
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ನ.27 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್‌ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ನಿರ್ಗಮಿಸಿ ಸಂಜೆ 03.50 ಕ್ಕೆ ತೋರಣಗಲ್‌ನ ಜಿಂದಾಲ್‌ನ ಏರ್‌ಸ್ಟಿçಪ್ ಗೆ ಆಗಮಿಸುವರು.
ನಂತರ ಸಂಜೆ 04 ಗಂಟೆಗೆ ತೋರಣಗಲ್‌ನ ಜಿಂದಾಲ್ ಏರ್‌ಸ್ಟಿçಪ್‌ನಿಂದ ಹೊರಟು, 04.30 ಗಂಟೆಗೆ ಬಳ್ಳಾರಿ ನಗರದ ಇಂದಿರಾನಗರದ ಬಳ್ಳಾರಿ ಆರೋಗ್ಯಮಾತೆ ಪುಣ್ಯಕ್ಷೇತ್ರ ಆವರಣದಲ್ಲಿ ಆಯೋಜಿಸಿರುವ ಬಳ್ಳಾರಿ ಆರೋಗ್ಯಮಾತೆ ಅಮೃತ ಸಂಭ್ರಮಾತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಸಂಜೆ 06 ಗಂಟೆಗೆ ಅಲ್ಲಿಂದ ಹೊರಟು, ಸಂಜೆ 06.30 ಗಂಟೆಗೆ ತೋರಣಗಲ್‌ನ ಜಿಂದಾಲ್ ಏರ್‌ಸ್ಟಿçಪ್‌ಗೆ ಆಗಮಿಸಿ, 06.40 ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.

Share This Article
error: Content is protected !!
";